Kannada NewsKarnataka NewsLatest
ಕಿತ್ತೂರು ಕ್ಷೇತ್ರದ ಅಭಿವೃದ್ಧಿಗೆ 2400ಕೋಟಿ ರೂ. ಅನುದಾನ ತಂದಿದ್ದೇನೆ- ಶಾಸಕ ಮಹಾಂತೇಶ ದೊಡಗೌಡರ್

ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು : 2023ರ ವಿಧಾನಸಭಾ ಚುನಾವಣೆಯಲ್ಲಿ ಜನರು ನನ್ನ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ, ಕ್ಷೇತ್ರದ ಸೇವೆಗೆ ಮತ್ತೊಮ್ಮೆ ಆಶೀರ್ವದಿಸಿದರೆ, ಮನೆಯ ಮಗನಂತೆ ಸೇವೆ ಮಾಡುವೆ ಎಂದು ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.


ಇಂಚಲದ ಡಾ. ಶಿವಾನಂದ ಭಾರತಿ ಸ್ವಾಮೀಜಿ ಮಾತನಾಡಿ, ಶಾಸಕ ಮಹಾಂತೇಶ ದೊಡಗೌಡರ ಸರಳ ಸ್ವಭಾವದವರು. ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದರು.
ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಕ್ಷೇತ್ರದ ಸಮಗ್ರ ಅಭಿವೃದ್ಧಿ ಜೊತೆಗೆ ಸುಮಾರು 500ವರ್ಷಗಳ ನಂತರ ಐತಿಹಾಸಿಕ ರಾಣಿ ಚನ್ನಮ್ಮನ ಕೋಟೆ ಮರುನಿರ್ಮಾಣಕ್ಕೆ ಮುಂದಾಗಿರುವ ಶಾಸಕ ಮಹಾಂತೇಶ ದೊಡಗೌಡರ ಅವರು ಕಿತ್ತೂರಿನ ಹೆಮ್ಮೆ ಎಂದರು.



ವಿವಿಧ ಪಿಂಚಣಿ ಪ್ರಮಾಣ ಪತ್ರ, ಉಜ್ವಲ್ ಗ್ಯಾಸ್ ವಿತರಣೆ, ಭಾಗ್ಯಲಕ್ಷ್ಮೀ ಭಾಂಡ್ ಮತ್ತು ಸುಕನ್ಯಾ ಸಮೃದ್ಧಿ ಯೋಜನೆ ಸೇರಿ ಸರ್ಕಾರದ ವಿವಿಧ ಪ್ರಮಾಣ ಪತ್ರಗಳನ್ನು ಇದೇ ವೇಳೆ ಪಲಾನುಭವಿಗಳಿಗೆ ವಿತರಿಸಲಾಯಿತು.
ಉಚಿತ ಆರೋಗ್ಯ ಮತ್ತು ಕಣ್ಣು ತಪಾಸಣಾ ಹಾಗೂ ರಕ್ತದಾನ ಶಿಬಿರದಲ್ಲಿ 10ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡು ಶಿಬಿರದ ಸದುಪಯೋಗಪಡೆದುಕೊಂಡರು.
150ಕ್ಕೂ ಅಧಿಕ ನುರಿತ ತಜ್ಞವೈದ್ಯರು ಶಿಬಿರದಲ್ಲಿ ಪಾಲ್ಗೊಂಡಿದ್ದ ಜನರ ಸಮಸ್ಯೆಗಳನ್ನು ಆಲಿಸಿ, ಚಿಕಿತ್ಸೆ ನೀಡುವ ಮೂಲಕ ಮಾತ್ರೆ ವಿತರಿಸಿದರು. ಸಲಹೆ-ಸೂಚನೆ ನೀಡಿದರು. ಸುಮಾರು 220ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.
ದೇಹದಾನ:ಡಾ. ಮಹಾಂತೇಶ ರಾಮಣ್ಣವರ ಅವರ ಸಮ್ಮುಖದಲ್ಲಿ ಬೈಲಹೊಂಗಲದ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಇವರ ಮೂಲಕ ಕೆಎಲ್ಇ ಡಾ. ಪ್ರಭಾಕರ್ ಕೋರೆ ಆಸ್ಫತ್ರೆಯ ನೇತ್ರ ಹಾಗೂ ಚರ್ಮ ಭಂಡಾರ, ದೇಹದಾನ ಜವಾಹರಲಾಲ್ ನೆಹರೂ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಆರೋಗ್ಯ ಶಿಬಿರದಲ್ಲಿ 10ಜನ ದೇಹದಾನ, 27ಜನ ನೇತ್ರದಾನ, 10ಜನ ಚರ್ಮದಾನ ಹಾಗೂ 10 ಜನ ಅಂಗಾಂಗ ದಾನ ಮಾಡಿ ಮಾದರಿಯಾದರು.
7ಸಾವಿರ ಆಯುಷ್ಮಾನ ಕಾರ್ಡ್ ವಿತರಣೆ:
ಆರೋಗ್ಯ ಶಿಬಿರದ ಜೊತೆಗೆ ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ಯೋಜನೆಯಾದ ಆಯುಷ್ಮಾನ ಭಾರತ ಆರೋಗ್ಯ ಕಾರ್ಡ್ ವಿತರಿಸಲಾಯಿತು. ಸುಮಾರು 7ಸಾವಿರ ಜನರಿಗೆ ಸ್ಥಳದಲ್ಲೇ ಆಯುಷ್ಮಾನ ಭಾರತ ಆರೋಗ್ಯ ಕಾರ್ಡ್ ವಿತರಿಸಲಾಯಿತು.
ಜನರ ಮಧ್ಯೆ ಬೆಳೆದ ಜನಸಾಮಾನ್ಯರ ಶಾಸಕ ಮಹಾಂತೇಶ ದೊಡ್ಡಗೌಡರ್
https://pragati.taskdun.com/%e0%b2%b0%e0%b2%be%e0%b2%9c%e0%b3%8d%e0%b2%af/mahantesh-doddagoudar-is-a-common-mans-mla-who-grew-up-among-the-people/
https://pragati.taskdun.com/karnataka-news/the-silent-worker-mahantesha-dodgowder/