Latest

ವಾಯುಸೇನೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಷ

ಪ್ರಗತಿವಾಹಿನಿ ಸುದ್ದಿ; ಪುಣೆ: ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ ಮಹಾರಾಷ್ಟ್ರದ ಪುಣೆಯ ಬಾರಾಮತಿ ಬಳಿ ತುರ್ತು ಭೂಸ್ಪರ್ಷ ಮಾಡಲಾಗಿದೆ.

ವಾಯುಸೇನೆಯ ಚೇತಕ್ ಹೆಲಿಕಾಪ್ಟರ್ ಪುಣೆಯಲ್ಲಿ ಎಮರ್ಜನ್ಸಿ ಲ್ಯಾಂಡ್ ಆಗಿದ್ದು, ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ. ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ತೊಂದರೆ ಕಂಡುಬಂದ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಷ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹೆಲಿಕಾಪ್ಟರ್ ನಲ್ಲಿದ್ದ ವಾಯುಸೇನೆ ಸಿಬ್ಬಂದಿ ಸುರಕ್ಷಿತರಾಗಿದ್ದಾರೆ. ಸಧ್ಯ ಪರಿಶೀಲನೆ ನಡೆದಿದೆ ಎಂದು ವಿಂಗ್ ಕಮಾಂಡರ್ ಆಶಿಶ್ ಮೊಗೆ ತಿಳಿಸಿದ್ದಾರೆ.

ಮರಾಠಿ ಪುಂಡ ವಿದ್ಯಾರ್ಥಿಗಳ ಬಂಧನಕ್ಕೆ ಆಗ್ರಹ; ಪೊಲೀಸರ ವಿರುದ್ಧವೂ ಕ್ರಮಕ್ಕೆ ಒತ್ತಾಯ; ಕರವೇ ಪ್ರತಿಭಟನೆ

Home add -Advt

https://pragati.taskdun.com/belagavigogate-collagekannada-flagkarave-protest/

Related Articles

Back to top button