Uncategorized

*IAS ಅಧಿಕಾರಿ ವಿರುದ್ಧ FIR*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಎ ಎಸ್ ಅಧಿಕಾರಿಯೊಬ್ಬರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ. ಕೊಡಗು ಜಿಲ್ಲಾ ಪಂಚಾಯತ್ ಸಿಇಒ ಡಾ.ಆಕಾಶ್ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಅವರ ಪತ್ನಿ ವಂದನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರಿನ ಪೂರ್ವ ವಿಭಾಗದ ಪೊಲೀಸ್ ಠಾಣೆಯಲ್ಲಿ ವಂದನಾ ದೂರು ದಾಖಲಿಸಿದ್ದು, ಐಎಎಸ್ ಅಧಿಕಾರಿ ಆಕಾಶ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

2022ರಲ್ಲಿ ನಿವೃತ್ತ ಡಿಐಜಿ ಪುತ್ರಿ ವಂದನಾ ಆಕಾಶ್ ಅವರನ್ನು ವಿವಾಹವಾಗಿದ್ದರು. ಮದುವೆ ಬಳಿಕ ಆಕಾಶ್ ವರದಕ್ಷಿಣೆ ಕಿರುಕುಳ, ಹಲ್ಲೆ ನಡೆಸಿದ್ದಾರೆ ಎಂದು ವಂದನ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಾ.ಆಕಾಶ್ ಹಾಗೂ ಅವರ ತಂದೆ, ತಾಯಿ, ಸಹೋದರನ ವಿರುದ್ಧವೂ ಪ್ರಕರಣ ದಾಖಲಾಗಿದೆ.
https://pragati.taskdun.com/cm-basavaraj-bommaireactionnandini-prodectamul/

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button