Kannada NewsKarnataka NewsLatest

*ಹಿರಿಯ ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗಷ್ಟೇ ಕೆಲ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದ ರಾಜ್ಯ ಸರ್ಕಾರ ಇಂದು ಮತ್ತೆ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೂತನವಾಗಿ ಸ್ಥಾಪಿಸಿರುವ ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹರ್ಷ ಗುಪ್ತ ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಅವರಿಗೆ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯ ಅಧ್ಯಕ್ಷ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ನೀಡಲಾಗಿದೆ.

Home add -Advt

ಹುದ್ದೆ ನಿರೀಕ್ಷೆಯಲ್ಲಿದ್ದ ಆರ್. ರಾಗಪ್ರಿಯ ಅವರನ್ನು ಕಾರ್ಮಿಕ ಇಲಾಖೆಯ ಆಯಕ್ತರನ್ನಾಗಿ ನೇಮಿಸಲಾಗಿದೆ. ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಡಾ. ಗೋಪಾಲ ಕೃಷ್ಣ ಅವರನ್ನು ಕಾಲೇಜು ಶಿಕ್ಷಣ ಇಲಾಖೆಗೆ ವರ್ಗಾಯಿಸಲಾಗಿದೆ. ಇನ್ನು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಎನ್. ಮಂಜುಶ್ರೀ ಅವರಿಗೆ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ.

Related Articles

Back to top button