Kannada NewsKarnataka News

ಈಶ್ವರಪ್ಪ ವಜಾ ಮಾಡಿದರೆ ಸಮಾಧಾನವಿಲ್ಲ – ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ವಜಾ ಮಾಡಿದರೆ ಸಮಾಧಾನವಿಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.

ಪ್ರಕರಣ ಗಂಭೀರವಾಗಿದ್ದು, ತಕ್ಷಣ ಈಶ್ವರಪ್ಪ ಬಂಧಿಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎದು ಹೆಬ್ಬಾಳಕರ್ ಆಗ್ರಹಿಸಿದ್ದಾರೆ.

Home add -Advt

ಸಂತೋಷ ನೇರವಾಗಿ ಆರೋಪವನ್ನು ಮಾಡಿದ್ದಾರೆ. ತಿಂಗಳ ಹಿಂದೆಯೇ ಅವರು ಹೇಳಿದ್ದರು. ಈಶ್ವರಪ್ಪ ವಿರುದ್ಧ 2 ಪ್ರಕರಣ ದಾಖಲಿಸಬೇಕು. ಆತ್ಮಹತ್ಯೆ ಸಂಬಂಧ ಒಂದು ಮತ್ತು ಭ್ರಷ್ಟಾಚಾರ ಸಂಬಂಧ ಇನ್ನೊಂದು ಪ್ರಕರಣ ದಾಖಲಿಸಬೇಕು ಎಂದೂ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದರು.

ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಬಂಧಿಸಿದರೆ ಈ ಪ್ರಕರಣದ ಆಳ ಗೊತ್ತಾಗಲಿದೆ. ಆಗ ಯಾರು ಅಧಿಕಾರದಲ್ಲಿದ್ದರು. ಟೆಂಡರ್ ಇಲ್ಲದೆ ಕೆಲಸ ಮಾಡುವಂತೆ ಯಾರು ಹೇಳಿದ್ದರು ಎಲ್ಲವೂ ಬಹಿರಂಗವಾಗಲಿದೆ ಎಂದರು.

ಸಂತೋಷ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಲಕ್ಷ್ಮೀ ಹೆಬ್ಬಾಳಕರ್; ಮನಕಲುಕುವಂತಿತ್ತು ಹೆಬ್ಬಾಳಕರ್ ಮಡಿಲಲ್ಲಿ ಮುಗ್ದ ಮಗುವಿನ ಆಟ

Related Articles

Back to top button