Kannada NewsKarnataka NewsLatest

ನಮಗೆ ತೊಂದರೆ ಮಾಡಲು ಬಂದರೆ ನಾವು ಸುಮ್ಮನಿರೆವು – ರಮೇಶ ಜಾರಕಿಹೊಳಿಗೆ ನೇರಾ ನೇರ ಎಚ್ಚರಿಕೆ ನೀಡಿದ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ : ಮಾಜಿ ಸಚಿವ ರಮೇಶ ಜಾರಕಿಹೊಳಿ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಬಂದು ತೊಂದರೆ ಮಾಡುತ್ತಿದ್ದಾರೆ. ಇದು ಮುಂದುವರಿದರೆ ನಾವು ಸುಮ್ಮನಿರುವುದಿಲ್ಲ ಎಂದು ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ನೇರ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರು ಅವರು, ನಾವು ಪಕ್ಷ ನಿಷ್ಠರು. ಪಕ್ಷವನ್ನು ಮೊದಲಿನಿಂದಲೂ ಸಂಘಟನೆ ಮಾಡಿದ್ದೇವೆ. ಆದರೆ ಈಗ ಅವರು ಬಂದು ಪಕ್ಷ ಸಂಘಟನೆ ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಹಾಗೆ ಮಾಡಿದರೆ ಅವರ ಕ್ಷೇತ್ರಕ್ಕೆ ಹೋಗಿ ತೊಂದರೆ ಕೊಡವುದೂ ನಮಗೆ ಗೊತ್ತಿದೆ. ನಾವೆಲ್ಲರೂ ಸೇರಿ ಸೂಕ್ತ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿ ಗಟ್ಟಿಯಾಗಿದೆ. ಹಾಲಿ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಸಂಘಟನೆ ಮಾಡಿಕೊಂಡಿದ್ದಾರೆ. ಆದರೆ ರಮೇಶ ಜಾರಕಿಹೊಳಿ ಅನಗತ್ಯವಾಗಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಬೇರೆಯವರನ್ನು ಎತ್ತಿಕಟ್ಟುತ್ತಿದ್ದಾರೆ. ಇದು ಮುಂದುವರಿದರೆ ನಾವೆಲ್ಲರೂ ಸೇರಿ ಅವರಿಗೆ ಸೂಕ್ತ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ

https://pragati.taskdun.com/the-statue-of-chhatrapati-shivaji-maharaj-will-be-unveiled-today/

ರಮೇಶ ಜಾರಕಿಹೊಳಿ ಟಾರ್ಗೆಟ್ ಮಾಡಿದ್ದು ಬೆಳಗಾವಿಯ 6+1 ಕ್ಷೇತ್ರ!

https://pragati.taskdun.com/ramesh-jarakiholi-targeted-the-61-constituency-of-belgaum/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button