Kannada NewsKarnataka News
ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆ ಸಲ್ಲಿಸಿದ ಕಿರಣ್ ಜಾಧವ್

ಪ್ರಗತಿ ವಾಹಿನಿ ಸುದ್ದಿ ಬೆಳಗಾವಿ
ಶಿವಾಜಿ ಜಯಂತಿ ಪ್ರಯುಕ್ತ ಬಿಜೆಪಿ ಕರ್ನಾಟಕ ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಹಾಗೂ ವಿಮಲ್ ಫೌಂಡೇಶನ್ ಅಧ್ಯಕ್ಷ ಕಿರಣ್ ಜಾಧವ್ ಅವರು ಬೆಳಗಾವಿಯ ಶಿವಾಜಿ ಗಾರ್ಡನ್ನಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಂದವಿ ಸಾಮ್ರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರು ತಮ್ಮ ಧೈರ್ಯ, ಸಾಹಸ, ಧರ್ಮನಿಷ್ಠೆ ಮೂಲಕ ಇಂದಿಗೂ ಪ್ರಸ್ತುತರಾಗಿದ್ದಾರೆ ಎಂದರು.
ಶಿವಾಜಿ ಜಯಂತಿ ಪ್ರಮುಕ್ತ ಮರಾಠಾ ಮಂಡಳದಿಂದ ಬೆಳಗಾವಿಯ ವಿವಿಧೆಡೆ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಂಡರು.
ಈ ವೇಳೆ ಸಕಲ ಮರಾಠಾ ಸಮಾಜದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಹಸುಗಳಿಗೂ ಬಂತು ಮಾಸ್ಕ್: ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಹೊಸ ಹೆಜ್ಜೆ




