Kannada NewsKarnataka NewsLatest

*ಅಕ್ರಮ ಮರಳು ಟ್ರ್ಯಾಕ್ಟರ್ ಗೆ ವಿದ್ಯಾರ್ಥಿ ಬಲಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಬಲಿಯಾಗಿರುವ ಘಟನೆ ರಾಯಚೂರು ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ.

18 ವರ್ಷದ ಮಲ್ಲೇಶ್ ಮೃತ ವಿದ್ಯಾರ್ಥಿ. ರಾಯಚೂರಿನ ಎಸ್ ಆರ್ ಪಿಎಸ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಮಲ್ಲೇಶ್, ಕೊತ್ತದೊಡ್ದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಹಿಂದಿನಿಂದ ಬಂದ ಟ್ರ್ಯಾಕ್ಟರ್ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಟ್ರ್ಯಾಕ್ಟರ್ ಚಾಲಕ ನಾಗರಾಜ್ ಸ್ಥಳದಿಂದ ಪರಾರಿಯಾಗಿದ್ದಾನೆ.

ಮರಳು ತುಂಬಿದ್ದ ಟ್ರ್ಯಾಕ್ಟರ್ ರಾಮಣ್ಣ ಎಂಬುವವರಿಗೆ ಸೇರಿದ್ದಾಗಿದ್ದು ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button