Latest

ಎಲ್ಲ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಚುನಾವಣೆಗೆ ಮುನ್ನ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ  ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಸರಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ   ತಿಳಿಸಿದರು.

ಅವರು ಇಂದು ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

Home add -Advt

ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ. ಪರಮೇಶ್ವರಪ್ಪ, ಎಚ್.ಕೆ. ಪಾಟೀಲ, ಕೆ.ಜೆ. ಜಾರ್ಜ್, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

ಮಕ್ಕಳ ಆಟ ಪಾಠಕ್ಕೆ ಸ್ನೇಹಿತರಾಗಿ; ಪಾಲಕರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಲಹೆ

ಬೆಳಗಾವಿಯಿಂದ ಮತ್ತೊಂದು ಇಲಾಖೆ ಸ್ಥಳಾಂತರ ಶಾಕ್ ಮೇಲೆ ಶಾಕ್

ದ್ವೇಷದ ರಾಜಕಾರಣವನ್ನು ಬಲಿ ಹಾಕಲಿದ್ದೇವೆ: ಸಿಎಂ ಸಿದ್ದರಾಮಯ್ಯ

Related Articles

Back to top button