ಪ್ರಗತಿವಾಹಿನಿ ಸುದ್ದಿ, ಬೆಳಗಾವಿ - ಕರ್ನಾಟಕ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಮನೆ ಮನೆಗೆ ನಲ್ಲಿ ನೀರು ಪೂರೈಸುವ ಯೋಜನೆಗೆ ಸೋಮವಾರ ಚಾಲನೆ ನೀಡಲಾಯಿತು.

ಪಿಕೆಪಿಎಸ್ ನ ಅಧ್ಯಕ್ಷ ಗಂಗಣ್ಣ ಕಲ್ಲೂರ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಿಕೆಪಿಎಸ್ ನ ಸದಸ್ಯರೆಲ್ಲರೂ ಸೇರಿ ಭೂಮಿ ಪೂಜೆಯ ಮೂಲಕ ಕಾಮಗಾರಿಗೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನ ಪ್ರತಿನಿಧಿಗಳು, ತಾಲೂಕ ಪಂಚಾಯತ್ ಸದಸ್ಯರಾದ ಯರಗಟ್ಟಿ ಮುಂತಾದವರು ಉಪಸ್ಥಿತರಿದ್ದರು.