Belagavi NewsBelgaum NewsPolitics

*ನೀನು ಬಚ್ಚಾ, ರಾಜ್ಯಾಧ್ಯಕ್ಷ ಆಗೋಕ್ಕೆ ನೀನು ಯೋಗ್ಯವಿಲ್ಲ: ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ರಮೇಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ನೀನು ಬಚ್ಚಾ, ರಾಜ್ಯಾಧ್ಯಕ್ಷ ಆಗೋಕ್ಕೆ ನೀನು ಯೋಗ್ಯವಿಲ್ಲ ಎನ್ನುವ ಮೂಲಕ  ಶಾಸಕ ರಮೇಶ್ ಜಾರಕಿಹೊಳಿ ನಾಲಿಗೆ ಬಿಗಿ ಹಿಡಿದು ಮಾತನಾಡಲಿ ಎಂದು ಎಚ್ಚರಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮತ್ತೆ ಗುಡಗಿದ್ದಾರೆ 

ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ ಅವರು, ವಿಜಯೇಂದ್ರ ನೀನು ಬಚ್ಚಾ ನೀನು ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ. ನಾನು ಇಂದಿಗೂ ಯಡಿಯೂರಪ್ಪ ವಿರುದ್ಧ ಅಗೌರವದಿಂದ ಮಾತನಾಡಿಲ್ಲ. ಇಂದಿಗೂ ನನಗೆ ಯಡಿಯೂರಪ್ಪ ಮೇಲೆ ಗೌರವ ಇದೆ. ಆದರೆ ನೀನು ಸುಳ್ಳು ಹೇಳುವುದನ್ನು ಬಿಡು ಎಂದು ಹರಿಹಾಯ್ದರು.

Home add -Advt

ನಾನು ವಿಜಯೇಂದ್ರ ಮನೆಯಿಂದಲೇ ಪ್ರವಾಸ ಮಾಡುತ್ತೇನೆ. ನಿನ್ನ ಸವಾಲನ್ನು ಸ್ವೀಕರಿಸಿದ್ದೇನೆ. ನೀನೇ ದಿನಾಂಕ ನಿಗದಿ ಮಾಡು. ಬೆಂಬಲಿಗರು, ಗನ್ ಮ್ಯಾನ್, ಯಾರೂ ಬರಲ್ಲ ನಾನೊಬ್ಬನೇ ಬರ್ತೀನಿ. ಶಿಕಾರಿಪುರದಿಂದಲೇ ಪ್ರವಾಸ ಆರಂಭಿಸುತ್ತೇನೆ. ಸಾಧ್ಯವಾದರೆ ತಡಿ ನೋಡೋಣ ಎಂದು ಸವಾಲು ಹಾಕಿದರು.

ನಿನ್ನನ್ನು ಬೇಕಾದರೆ ಮೂಲೆ ಮೂಲೆಯಲ್ಲಿ ಓಡಾಡಲು ಬಿಡದ ಹಾಗೆ ಮಾಡಲು ಶಕ್ತಿ ನನಗಿದೆ. ನಿನ್ನಷ್ಟು ಕೀಳು ಮಟ್ಟದ ರಾಜಕಾರಣಿ ನಾನಲ್ಲ. ಬಿ.ವೈ. ವಿಜಯೇಂದ್ರ ಮೇಲೆ ನನಗೆ ಗೌರವ ಇಲ್ಲ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಗೌರವ ಇದೆ. ನಮ್ಮ ಪಕ್ಷದಲ್ಲಿ ಜಗಳ ಇರೋದು ಅಧ್ಯಕ್ಷರ ಬದಲಾವಣೆಗಾಗಿ ಅಷ್ಟೇ ಎಂದು ಹೇಳಿದರು.

ನಮ್ಮ ಪಕ್ಷದ ಅಧ್ಯಕ್ಷ ಇಳಿಸಲು ಹೋರಾಟ ಮಾಡ್ತಿದ್ದೇವೆ. ವಿಜಯೇಂದ್ರ ನಿನಗೆ ಸಮಾವೇಶದಲ್ಲಿ ಹೇಳಿ ಎಚ್ಚರಿಕೆ ಕೊಡ್ತೇನಿ. ನಾನು ನಿಮ್ಮಪ್ಪನ್ನು ಸಿಎಂ ಮಾಡೋದಕ್ಕೆ ಬಂದೆ ವಿಜಯೇಂದ್ರಾ ಎಂದು ವಾಗ್ದಾಳಿ ನಡೆಸಿದರು.

ಒಳ್ಳೆಯ ಅಧ್ಯಕ್ಷರನ್ನ ಮಾಡೋದಕ್ಕೆ ಸಹಕಾರ ಕೊಡಿ. ಪದೇ ಪದೇ ಸೈಕಲ್ ನಿಂದ ಓಡಾಟ ಮಾಡಿದ್ದೇನೆ ಎನ್ನಬೇಡಿ. ಪಕ್ಷದ ಸಾವಿರಪಟ್ಟು ಲಾಭವನ್ನ ಪಡೆದಿರುವಿರಿ ಎಂದು ರಮೇಶ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು. 

Related Articles

Back to top button