Film & EntertainmentKannada NewsKarnataka NewsNational

*ಹಳೆ ಪ್ರಕರಣದಲ್ಲಿ ದರ್ಶನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಮುಂದಾದ ಅರಣ್ಯ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರೋ ನಟ ದರ್ಶನ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮವಾಗಿ ಬಾತುಕೋಳಿ ಸಾಕಿರುವ ಆರೋಪದಡಿ ದರ್ಶನ್ ವಿರುದ್ಧ ಅರಣ್ಯ ಇಲಾಖೆ ಹಳೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಮುಂದಾಗಿದೆ.

ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಕೇಸ್​ಗೆ ಸಂಬಂಧಿಸಿದ್ದಂತೆ ದೂರು ದಾಖಲಾಗಿ ಐದು ಬಾರಿ ನೋಟಿಸ್ ಕೊಟ್ಟರು ಕೂಡ ನಟ ದರ್ಶನ್ ವಿಚಾರಣೆಗೆ ಹಾಜರಾಗಿಲ್ಲ. 

ಹೀಗಾಗಿ ಈ ಕೇಸ್​ ಗೆ ಸಂಬಂಧಿಸಿದಂತೆ ದರ್ಶನ್​ ಪತ್ನಿ ವಿಜಯಲಕ್ಷ್ಮಿ A1, ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ A2 ಹಾಗೂ ನಟ ದರ್ಶನ್ A3 ಆರೋಪಿ ಮಾಡಲಾಗಿದೆ. 

ಈಗಾಗಲೇ 5 ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಕಾರಣ 2 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button