Kannada NewsKarnataka NewsLatest

ಕಾಂಗ್ರೆಸ್ ಸೇವಾದಳ ತರಬೇತಿ ಕಟ್ಟಡದ ಉದ್ಘಾಟನೆ ಮುಂದಕ್ಕೆ

ಪ್ರಗತಿವಾಹಿನಿ ಸುದ್ದಿ, ಗೋಕಾಕ: ತಾಲೂಕಿನ ಘಟಪ್ರಭಾದಲ್ಲಿ ಕಾಂಗ್ರೆಸ್ ಸೇವಾದಳ ತರಬೇತಿ ಕಟ್ಟಡದ ಉದ್ಘಾಟನೆಯನ್ನು ಮುಂದೂಡಲಾಗಿದ್ದು ಈಗಾಗಲೇ ನಿಗದಿಯಾಗಿದ್ದ ಅಕ್ಟೋಬರ್ ೨ ರಂದು ಗಾಂಧಿ ಜಯಂತಿಯನ್ನು ಮಾತ್ರ ಆಚರಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ನಗರದ ಹಿಲ್ ಗಾರ್ಡನ್ನನ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ರಾಹುಲ ಗಾಂಧಿ ಅವರನ್ನು ಖುದ್ದು ಭೇಟಿಯಾಗಿ ಉದ್ಘಾಟನೆಗೆ ಆಹ್ವಾನಿಸಿ ಮುಂದಿನ ದಿನಾಂಕವನ್ನು ನಿಗದಿಪಡಿಸುತ್ತೇನೆ ಎಂದರು.
ಗಾಂಧಿ ಜಯಂತಿ ದಿನದಂದು ಸಿದ್ಧರಾಮಯ್ಯ, ಡಿ ಕೆ ಶಿವಕುಮಾರ, ಎಸ್ ಆರ್ ಪಾಟೀಲ ಸೇರಿ ಗಣ್ಯರು ಘಟಪ್ರಭಾದ ಕಾಂಗ್ರೆಸ್ ಸೇವಾದಳ ಕಚೇರಿಗೆ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ ಅವರು ಸೇವಾದಳ ಕಟ್ಟಡ ಉದ್ಘಾಟನೆಗೆ ರಾಹುಲ ಗಾಂಧಿ ಅವರ ಅಮೃತ ಹಸ್ತದಿಂದ ಉದ್ಘಾಟಿಸುವದರಿಂದ ಮುಂದೂಡಲಾಗಿದೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button