Belagavi NewsBelgaum NewsKannada NewsKarnataka News

*ನಾಳೆ ಕರ್ನಾಟಕ ಯುವರಕ್ಷಣಾ ವೇದಿಕೆಯ ಜಿಲ್ಲಾ ಘಟಕ ಉದ್ಘಾಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಯುವರಕ್ಷಣಾ ವೇದಿಕೆಯ ಜಿಲ್ಲಾ ಉದ್ಘಾಟನಾ ಸಮಾರಂಭ ಸೆ.1 ರಂದು ನಡೆಯಲಿದೆ ಎಂದು ಯುವರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷ ಅವರು ಮಾಹಿತಿ ನೀಡಿದರು.‌

ಇಂದು ನಗರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿ ನಗರದ ಕನ್ನಡ ಭವನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.‌ ಇದರ ಮುಂಚೆ ಬೆಳಗಾವಿ ನಗರದ ಚೆನ್ನಮ್ಮ ವೃತ್ತದಿಂದ ಕೊಲ್ಲಾಪುರ ವೃತ್ತದ ಮಾರ್ಗವಾಗಿ ಜನಪದ ಕಲಾ ತಂಡದಿಂದ ಕನ್ನಡ ಜನಪದ ಉತ್ಸವ ಮೆರವಣಿಗೆ ಹಾಗೂ ನಮ್ಮ ವೇದಿಕೆಯಿಂದ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ “ಕ.ಯು.ವೇ ಬೆಳಗಾವಿ ರತ್ನ” ಎಂಬ ಪ್ರಶಸ್ತಿ ನೀಡಿ ಗೌರವಿಸುವ ಆದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. 

Home add -Advt

Related Articles

Back to top button