ಜನರ ಪಾಲ್ಗೊಳ್ಳುವಿಕೆಯಿಂದ ಪಂಚಾಯಿತಿ ವ್ಯವಸ್ಥೆಗೆ ಬಲ -ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ ಕಟ್ಟಡವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಉದ್ಘಾಟಸಿದರು.


ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಯುವ ಮುಖಂಡ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಗುರು ಹಿರಿಯರು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ರೇಶನ್ ಸಾಮಗ್ರಿ ವಿತರಣೆ

ಇದೇ ವೇಳೆ ಕುಕಡೊಳ್ಳಿ ಗ್ರಾಮದಲ್ಲಿ ನರೇಗಾದ ಅಡಿಯಲ್ಲಿ ದುಡಿಯುತ್ತಿರುವ ಕಾರ್ಮಿಕರನ್ನು ಭೇಟಿ ಮಾಡಿದ ಶಾಸಕ ಲಕ್ಷ್ಮಿ ಹೆಬ್ಬಾಳಕರ್, ಅವರ ಆರೋಗ್ಯ ಹಾಗೂ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ಜೊತೆಗೆ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ರೇಷನ್ ಸಾಮಾಗ್ರಿಗಳನ್ನು ವಿತರಿಸಿ ಅವರ ಕಷ್ಟಗಳಿಗೆ ಸ್ಪಂದಿಸಿದರು.