
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜಿಲ್ಲೆಯಲ್ಲೇ ಮೊದಲ ಸಾಕ್ಷರ ಭಾರತ ಕಲಿಕಾ ಕೇಂದ್ರ ಶುಕ್ರವಾರ ಬೆಳಗಾವಿಯ ರಾಣಿ ಚನ್ನಮ್ಮ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಯಾಯಿತು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಿಜ್ವಾನ್ ನಾವ್ಗೇಕರ್ ಕೇಂದ್ರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಕ್ಷರ ಭಾರತ ಕಲಿಕಾ ಕೇಂದ್ರ ಅನಕ್ಷರಸ್ಥರಿಗೆ ಓದು ಬರಹ ಕಲಿಸುವ ಉದ್ದೇಶದಿಂದ ಸರಕಾರ ಆರಂಭಿಸಿರುವ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟೂ 50 ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಇದು ಜಿಲ್ಲೆಯ ಪ್ರಪ್ರಥಮ ಸಾಕ್ಷರ ಭಾರತ ಕಲಿಕಾ ಕೇಂದ್ರವಾಗಿದೆ ಎಂದು ತಿಳಿಸಿದರು.

https://pragati.taskdun.com/nekar-samman-dbt-subsidy-transfercm-basavaraj-bommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ