Kannada NewsKarnataka NewsLatestPolitics

*ಭಾಷಣಕ್ಕೆ ಬುಲೆಟ್ ಪ್ರೂಫ್ ಗ್ಲಾಸ್ ಬೇಡವೆಂದ ಸಿಎಂ; ಸೂಚನೆ ಮೇರೆಗೆ ತೆರವು ಮಾಡಿದ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 77ನೇ ಸ್ವಾತಂತ್ರ್ಯ ದಿನಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ಬಳಿಕ ತೆರೆದ ಜೀಪ್ ನಲ್ಲಿ ಪರೇಡ್ ಪರಿವೀಕ್ಷಣೆ ಮಾಡಿ ಗೌರವ ರಕ್ಷೆ ಸ್ವೀಕಾರ ಮಾಡಿದರು. ಬಳಿಕ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದರು.

Home add -Advt

ಈ ವೇಳೆ ಸಿಎಂ ಸಿದ್ದರಾಮಯ್ಯ ಭಾಷಣ ಮಡುವ ಸ್ಥಳದಲ್ಲಿ ಬುಲೇಟ್ ಪ್ರೂಫ್ ಗ್ಲಾಸ್ ಅಳವಡಿಸಲಾಗಿತ್ತು. ಬುಲೆಟ್ ಪ್ರೂಫ್ ಗ್ಲಾಸ್ ಬೇಡ ಅದನ್ನು ತೆರವುಗೊಳಿಸಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕರಿಗಳಿಗೆ ಸೂಚಿಸಿದರು. ಸಿಎಂ ಸೂಚನೆ ಮೇರೆಗೆ ಬುಲೆಟ್ ಪ್ರೂಫ್ ನ್ನು ಅಧಿಕಾರಿಗಳು ತೆರವು ಮಾಡಿದರು.

Related Articles

Back to top button