
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬೆಳಗಾವಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಬೆಳಗಾವಿ ದಕ್ಷಿಣ ಮತಕ್ಷೇತ್ರ ಅಧಿಕೃತ ಅಭ್ಯರ್ಥಿ ಅಭಯ ಪಾಟೀಲ ಅವರ ಪ್ರಚಾರಾರ್ಥವಾಗಿ ಬಸವರಾಜ ಬೊಮ್ಮಾಯಿ ಏ. 25 ರಂದು ಸಂಜೆ: 5 ಗಂಟೆಗೆ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಉದ್ಯಾನದಿಂದ ಖಾಸಭಾಗ ಶ್ರೀ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ( “ರೋಡ್ ಶೋ) ನಡೆಸಲಿದ್ದಾರೆ.