Kannada NewsKarnataka NewsLatest

*ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಹಡಗು; 8 ವಿಜ್ಞಾನಿಗಳು ಸೇರಿದಂತೆ ಹಲವರ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ; ಕಾರವಾರ: ಅಲೆಗಳ ಅಬ್ಬರಕ್ಕೆ ಸಿಲುಕಿದ ಸಿಎಸ್ ಐಆರ್ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಓಷಿಯಾನೋಗ್ರಫಿ ಸಂಶೋಧನಾ ಹಡಗು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ಸಮುದರದಲ್ಲಿ ಸಿಲುಕಿಕೊಂಡಿದೆ.

ಎಂಜೀನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದ್ದ ಹಡಗಿನಲ್ಲಿದ್ದ 8 ವಿಜ್ಞಾನಿಗಳು ಸೇರಿದಂತೆ ಹಲವರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.

ಕಾರವಾರ ಸಮೀಪ ಸಮುದ್ರದಲ್ಲಿ ಆರ್ ವಿ ಸಿಂಧೂ ಸಾಧನಾ ಎಂಬ ಹಡಗು ಎಂಜಿನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದೆ. ಹಡಗಿನಲ್ಲಿ ತೈಲ ಸೋರಿಕೆಯಾಗಿರಬಹುದು ಎಂದು ಅಧಿಕಾರಿಗಳು ಕೋಸ್ಟ್ ಗಾರ್ಡ್ ಗೆ ಮಾಹಿತಿ ರವಾನಿಸಿದ್ದರು.

ಈ ಹಿನ್ನೆಲೆಯಲ್ಲಿ ಕೋಸ್ಟ್ ಗಾರ್ಡ್ ಸಿಬ್ಬಂದಿ ಕಡಲ ತೀರದಿಂದ 20 ನಾಟಿಕಲ್ ಮೈಲಿಗಳಷ್ಟು ದೂರವಿದ್ದ ಹಡಗಿನ ಸಂಪರ್ಕ ಪಡೆದು ರಕ್ಷಣಾ ಕಾರಾಚರಣೆ ನಡೆಸಿದ್ದಾರೆ. ಹಡಗಿನಲ್ಲಿ 8 ಮಂದಿ ಹಿರಿಯ ವಿಜ್ಞಾನಿಗಳು, ಮೌಲ್ಯಯುತ ವೈಜ್ಞನಿಕ ಉಪಕರಣಗಳು ಸಂಶೋಧನಾ ಮಾಹಿತಿ ಸೇರಿದಂತೆ 36 ಜನರು ಇದ್ದರು. ಭಾರಿ ಮಳೆ, ಸಮುದ್ರದಲ್ಲಿ ಅಲೆಗಳ ಅಬ್ಬರ, ಅಪಾಯದ ಸ್ಥಿತಿಯಲ್ಲಿಯೂ ಇಂಡಿಯನ್ ಕೋಸ್ಟ್ ಗಾರ್ಡ್ ತಂಡ ಹಡಗನ್ನು ಸುರಕ್ಷಿತವಾಗಿ ಗೋವಾಕ್ಕೆ ಎಳೆದೊಯ್ದಿದೆ.

Home add -Advt

ಹಡಗಿನಲ್ಲಿರುವ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕೋಸ್ಟ್ ಗಾರ್ಡ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button