*ಮತಗಟ್ಟೆಯ ಮೇಲೆ ಗ್ರಾಮಸ್ಥರಿಂದ ದಾಳಿ; ಮತಯಂತ್ರ ಪೀಠೋಪಕರಣ ದ್ವಂಸ; ಲಾಠಿ ಚಾರ್ಜ್*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕರಿಸಿದ್ದ 5 ಗ್ರಾಮಗಳ ಗ್ರಾಮಸ್ಥರು ಮತಗಟ್ಟೆಯ ಮೇಲೆ ದಾಳಿ ನಡೆಸಿ, ಮತಯಂತ್ರ, ಪೀಠೋಪಕರಣಗಳನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮೂಲಸೌಕರ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ್ದರು. ಚುನಾವಣಾ ಅಧಿಕಾರಿಗಳು ಗ್ರಾಮಸ್ಥರನ್ನು ಮನವೊಲಿಕೆ ಮಾಡಿ ಇಂಡಿಗನತ್ತ ಮತಗಟ್ಟೆಗೆ ಕರೆತಂದಿದ್ದಾರೆ. ಈ ವೇಳೆ ಮತದಾನದಿಂದ ದೂರ ಉಳಿದಿದ್ದ ಇನ್ನೊಂದು ಗ್ರಾಮದ ಮತದಾರರು ಮತಗಟ್ಟೆ ಸುತ್ತ ನಿಂತಿದ್ದರು. … Continue reading *ಮತಗಟ್ಟೆಯ ಮೇಲೆ ಗ್ರಾಮಸ್ಥರಿಂದ ದಾಳಿ; ಮತಯಂತ್ರ ಪೀಠೋಪಕರಣ ದ್ವಂಸ; ಲಾಠಿ ಚಾರ್ಜ್*