Kannada NewsKarnataka NewsLatest
ಖರ್ಗೆ ಭೇಟಿಯಾದ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ದೊಡ್ಡ ಸುದ್ದಿಗೆ ಕಾರಣರಾದ ಬೆನ್ನಲ್ಲೆ
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಹ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು.
ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭಾನುವಾರ ರಾತ್ರಿ ಖರ್ಗೆ ಅವರನ್ನು ಭೇಟಿ ಮಾಡಿ ಡಿಕೆಶಿ ಸಮಾಲೋಚನೆ ನಡೆಸಿದರು.



