Kannada NewsKarnataka NewsPolitics

*ಪ್ರಜ್ವಲ್ ಪ್ರಕರಣದಲ್ಲಿ ಎಸ್‌ಐಟಿ ನಡೆಸುವ  ತನಿಖೆಯ ಮಾಹಿತಿ ಕಾಂಗ್ರೆಸ್‌ಗೆ ಹೋಗ್ತಿದೆ: ಆರ್.ಅಶೋಕ್ ಆರೋಪ*

ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್‌ಐಟಿ ನಡೆಸುವ ಪಿನ್ ಟು ಪಿನ್ ತನಿಖೆಯ ಮಾಹಿತಿ ಕಾಂಗ್ರೆಸ್‌ಗೆ ಹೋಗ್ತಿದೆ. ಅದಕ್ಕಾಗಿಯೇ ಬಿಜೆಪಿ ಕಡೆ ತಿರುಗಿಸ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕಾದರೆ ಸಿಬಿಐಗೆ ತನಿಖೆ ವಹಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವ್ರಿಗೆ ತಮ್ಮ ಮೇಲೆ ಬಂದ ಆಪಾದನೆಯಿಂದ ಇರಿಸುಮುರಿಸು ಆಗಿದೆ. ಎಸ್‌ಐಟಿ ಅಧಿಕಾರಿಗಳು ಪಕ್ಷಪಾತ ಧೋರಣೆ ತೋರಿಸ್ತಿದ್ದಾರೆ. ಇದರ ಹಿಂದೆ ದೊಡ್ಡ ತಿಮಿಂಗಿಲ ಇದೆ ಅಂತ ಹೆಚ್ಡಿಕೆ ಆರೋಪ ಮಾಡಿದ್ದಾರೆ. ಎಲ್ಲೋ ಒಂದು ಕಡೆ ಇದನ್ನು ಬಿಜೆಪಿ ಕಡೆ ತಿರುಗಿಸಲು ಸಂಚು ನಡೆದಿದೆ ಎಂದರು.

ಒಕ್ಕಲಿಗ ಸಮುದಾಯ ತಮ್ಮ ವಿರುದ್ಧ ತಿರುಗಿ ಬೀಳುವ ಭೀತಿಯಿಂದ ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಆರೋಪ ಮಾಡ್ತಿದ್ದಾರೆ. ಪೆನ್‌ಡ್ರೈವ್ ಹಂಚಿದವರೇ ಕಾಂಗ್ರೆಸ್ ನವ್ರು, ಇದರಲ್ಲಿ ಎರಡು ಮಾತಿಲ್ಲ. ಈಗ ತಮ್ಮ ಮೇಲಿನ ಆಪಾದನೆಯನ್ನು ಬಿಜೆಪಿ ಕಡೆ ತಿರುಗಿಸ್ತಿದ್ದಾರೆಂದು ಆರೋಪಿಸಿದರು.

Home add -Advt

ಪ್ರಜ್ವಲ್ ವಾಪಸ್ ಬಂದಿಲ್ಲ, ಎಸ್‌ಐಟಿ ನವ್ರು ಬಂಧಿಸಿ ಕರೆತಂದಿಲ್ಲ. ಸಿಬಿಐನವ್ರು ತನಿಖೆ ನಡೆಸಿದರೆ ಪ್ರಜ್ವಲ್‌ನ ಕರೆತರಬಹುದು ಎಂದ ಅವರು, ಹಾಸನ ಕಾಂಗ್ರೆಸ್ ಕಾರ್ಯಕರ್ತರ ಬಳಿಯೂ ವಿಡಿಯೋ ಮತ್ತು ಪೆನ್‌ಡ್ರೈವ್ ಇದೆ. ಕಾಂಗ್ರೆಸ್ ಕಾರ್ಯಕರ್ತರ ಮೊಬೈಲ್‌ಗಳನ್ನೂ ಚೆಕ್ ಮಾಡಲಿ, ಯಾಕೆ ಕಾಂಗ್ರೆಸ್ ಕಾರ್ಯಕರ್ತರ ವಿಚಾರಣೆ ಮಾಡಿಲ್ಲ, ಇದೆಲ್ಲ ದೊಡ್ಡ ಪ್ರೀಪ್ಲಾನ್ ಮಾಡಿಯೇ ಮಾಡ್ತಿದೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button