Kannada NewsKarnataka NewsLatest

*ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ವ್ಯಕ್ತಿ: ಡ್ಯಾಂಗೆ ಹಾರಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಐಪಿಎಲ್ ಬೆಟ್ಟಿಂಗ್ ಆಡಿ ಹಣ ಕಳೆದುಕೊಂಡ ವ್ಯಕ್ತಿ ಮಾನಸಿಕವಾಗಿ ತೀವ್ರವಾಅಗಿ ನೊಂದು ಬೆಣ್ಣೆತೊರಾ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರುಮ್ಮನಗೋಡ್ ನಿವಾಸಿ ಚಂದ್ರಕಾಂತ್ ದೇಸಾಯಿ (೪೦) ಆತ್ಮಯತ್ಯೆ ಮಾಡಿಕೊಂಡ ವ್ಯಕ್ತಿ. ಬೆಟ್ಟಿಂಗ್ ಆಡಿ ಹಣ ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಹಲವೆಡೆ ಸಾಲ ಮಾಡಿಕೊಂಡಿದ್ದ.

Home add -Advt

ಸಾಲಗಾರರ ಕಿರುಕುಳ ಹೆಚ್ಚಾಗುತ್ತಿದ್ದಂತೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗೂರು ಸೇತುವೆ ಬಳಿ ಬೈಕ್ ನಿಲ್ಲಿಸಿ. ಅಲ್ಲಿಯೇ ಮೊಬೈಲ್ ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button