CrimeKannada NewsKarnataka NewsSports

*ಬ್ಲಾಕ್‌ನಲ್ಲಿ ಐಪಿಎಲ್ ಟಿಕೆಟ್ ಮಾರಾಟ: KSCA ಸದಸ್ಯನೆ ಮುಖ್ಯ ಆರೋಪಿ*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಬ್ಲಾಕ್​ನಲ್ಲಿ ಮಾರಾಟ ಮಾಡುತ್ತಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ದಸ್ಯ ಈ ದಂಧೆಯ ಹಿಂದಿರುವುದು ಬೆಳಕಿಗೆ ಬಂದಿದ್ದು, ಸಿಸಿಬಿ ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. 

ಕೆಎಸ್​ಸಿಎ ಸದ್ಯ ಚಿನ್ನಸ್ವಾಮಿ ಸ್ಟೇಡಿಯಂ ಹೋಟೆಲ್ ಕ್ಯಾಪ್ಟನ್ ಜೊತೆ ಸೇರಿ ಕೃತ್ಯ ಎಸಗುತ್ತಿದ್ದ ಎಂಬುದು ಸಿಸಿಬಿ ವಿಚಾರಣೆ ವೇಳೆ ಬಯಲಾಗಿದೆ

Home add -Advt

ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಲಕ್ಷ್ಮೀ ಕ್ಯಾಟರ್ಸ್ ಹೋಟೆಲ್‌ನ ಕ್ಯಾಪ್ಟನ್ ಚಂದ್ರಶೇಖರ್ ಎಂಬಾತ ಸಿಕ್ಕಿಬಿದ್ದಿದ್ದಾನೆ. 15 ಸಾವಿರ ರೂಪಾಯಿ ಬೆಲೆಯ ಟಿಕೆಟ್‌ಗಳನ್ನು ಈತ ಬರೋಬ್ಬರಿ 19 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಸೆರೆಹಿಡಿದಿದ್ದಾರೆ. ವಿಚಾರಣೆ ವೇಳೆ ಈತ ಕೆಎಸ್​​ಸಿಎ ಸದಸ್ಯ ಗಣೇಶ್ ಹರಿಕೇಶ್ ಎಂಬುವವರ ಹೆಸರನ್ನು ಬಾಯ್ಬಿಟ್ಟಿದ್ದಾನೆ.

ಆರೋಪಿ ಗಣೇಶ್ ಹರಿಕೇಶ್, ಎರಡು ಖಾಸಗಿ ಕಂಪನಿಗಳ ಹೆಸರಿನಲ್ಲಿ ಆನ್‌ಲೈನ್ ಮೂಲಕ ದೊಡ್ಡ ಪ್ರಮಾಣದಲ್ಲಿ ಟಿಕೆಟ್‌ಗಳನ್ನು ಖರೀದಿಸುತ್ತಿದ್ದ. ಆ ಬಳಿಕ ಚಂದ್ರಶೇಖರ್ ಮೂಲಕ ಅವುಗಳನ್ನು ಬ್ಲಾಕ್‌ನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು. ಆರ್‌ಸಿಬಿಯ ಮೊದಲ ಪಂದ್ಯದಲ್ಲಿ ಇವರು 81 ಟಿಕೆಟ್‌ಗಳನ್ನು ಮಾರಾಟ ಮಾಡಿದ್ದರು. ಕಳೆದ ಪಂದ್ಯಕ್ಕೆ 100 ಟಿಕೆಟ್‌ಗಳನ್ನು ಸಿದ್ಧಪಡಿಸಿಕೊಂಡಿದ್ದರು. ಒಟ್ಟಾರೆಯಾಗಿ 17 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ 181 ಟಿಕೆಟ್‌ಗಳನ್ನು ಖರೀದಿಸಿದ್ದು, ಅವುಗಳ ಪೈಕಿ 100 ಟಿಕೆಟ್​ಗಳನ್ನು ಬ್ಲಾಕ್​ನಲ್ಲಿ ಮಾರಾಟ ಮಾಡಿರುವುದು ಪತ್ತೆಯಾಗಿದೆ.

ಸದ್ಯ ಚಂದ್ರಶೇಖರ್ ಬಂಧನವಾಗುತ್ತಿದ್ದಂತೆ ಗಣೇಶ್ ಹರಿಕೇಶ್ ನಾಪತ್ತೆಯಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ. ಟಿಕೆಟ್ ಪೂರೈಸಿದ ಜೀನಿ ಸೇರಿದಂತೆ ಎರಡು ಖಾಸಗಿ ಸಂಸ್ಥೆಗಳಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

Related Articles

Back to top button