Karnataka News

*ಕರಾವಳಿ ಭಾಗದ ಹಿರಿಯ ಪೊಲೀಸ್ ಅಧಿಕಾರಿಗಳ ದಿಢೀರ್ ಎತ್ತಂಗಡಿ*

ಪ್ರಗತಿವಾಹಿನಿ ಸುದ್ದಿ: ಪ್ರಮುಖ ಬೆಳವಣಿಗೆಯಲ್ಲಿ ಕರಾವಳಿ ಭಾಗದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಎತ್ತಂಗಡಿ ಮಾಡಿ ಆದೇಶ ಹೊರಡಿಸಿರುವ ಸರ್ಕಾರ, ಅವರ ಜಾಗಕ್ಕೆ ಸುಧೀರ್ ರೆಡ್ಡಿ ಅವರನ್ನು ನೇಮಕ ಮಾಡಿದೆ. ಅನುಪಮ್ ಅಗರ್ವಾಲ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಭಾಗಕ್ಕೆ ಡಿಜಿಐ ಆಗಿ ವರ್ಗಾವಣೆ ಮಾಡಲಾಗಿದೆ.

Home add -Advt

ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ನೂತನ ಎಸ್ ಪಿಯಾಗಿ ಡಾ.ಅರುಣ್ ಅವರನ್ನು ನೇಮಕ ಮಾಡಲಾಗಿದೆ.

ಉಡುಪಿ ಎಸ್ ಪಿಯಾಗಿದ್ದ ಡಾ.ಅರುಣ್ ಅವರನ್ನು ದಕ್ಷಿಣ ಕನ್ನಡ ಎಸ್ ಪಿಯನ್ನಾಗಿ ನೇಮಕ ಮಾಡಲಾಗಿದ್ದು, ಉಡುಪಿ ಎಸ್ ಪಿಯಾಗಿ ಹರಿರಾಮ್ ಶಂಕರ್ ಅವರನ್ನು ನೇಮಕ ಮಾಡಲಾಗಿದೆ.

Related Articles

Back to top button