Belagavi NewsBelgaum NewsKannada NewsKarnataka NewsLatest

ಮಂಗಳವಾರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧ್ಯಕ್ಷತೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸಭೆ ಮಂಗಳವಾರ ನವಿಲುತೀರ್ಥದಲ್ಲಿ ನಡೆಯಲಿದೆ.

ಬೆಳಗ್ಗೆ 11 ಗಂಟೆಗೆ ಸೂಪರಿಂಟೆಂಡೆಂಟ್ ಎಂಜಿನಿಯರ್ ಕಚೇರಿಯಲ್ಲಿ ನಡೆಯಲಿರುವ ಸಭೆಯ ಅಧ್ಯಕ್ಷತೆಯನ್ನು ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆಯೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಹಿಸುವರು.

ಮಲಪ್ರಭಾ ನೀರಾವರಿ ಪ್ರದೇಶ ವ್ಯಾಪ್ತಿಯ ವಿವಿಧ ಜಿಲ್ಲೆಯ ಶಾಸಕರು, ಸಮಿತಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಸಭೆಯ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಖಾನಾಪುರ ತಾಲೂಕಿನ ಮಲಪ್ರಭಾ ನದಿ ಪ್ರದೇಶಕ್ಕೆ ಭೇಟಿ ನೀಡಿ ನದಿಯ ನೀರಿನ ಪ್ರಮಾಣ, ಒಳಹರಿವಿನ ಪ್ರಮಾಣ ಮತ್ತಿತರ ಮಾಹಿತಿ ಪಡೆದರು. 

Home add -Advt

Related Articles

Back to top button