Kannada NewsKarnataka NewsPolitics
*ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.




