Latest

ಆಸ್ಪತ್ರೆ ಕೇಳಿದವರನ್ನು ಬ್ಲಾಕ್ ಮಾಡುತ್ತಿದ್ದಾರೆಯೇ ಸಂಸದ?

ಪ್ರಗತಿವಾಹಿನಿ ಸುದ್ದಿ, ಶಿರಸಿ:

ಉತ್ತರ ಕನ್ನಡ ಜಿಲ್ಲೆಗೊಂದು ಸುಸಜ್ಜಿತ ಆಸ್ಪತ್ರೆ ಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.

ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರು ಆರಂಭಿಸಿರುವ ಈ ಅಭಿಯಾನಕ್ಕೆ ಭಾರೀ ಜನ ಬೆಂಬಲ ವ್ಯಕ್ತವಾಗುತ್ತಿದೆ.

ಸಂಸದ ಅನಂತಕುಮಾರ ಹೆಗಡೆ, ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳನ್ನು ಟ್ಯಾಗ್ ಮಾಡಿ ಅಭಿಯಾನ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಕಳಿಸಲಾಗುತ್ತಿದೆ.

Home add -Advt

ಆದರೆ, ತಮ್ಮನ್ನು ಟ್ಯಾಗ್ ಮಾಡುತ್ತಿರುವವರನ್ನು ಸಂಸದ ಅನಂತ ಕುಮಾರ ಹೆಗಡೆ ಬ್ಲಾಕ್ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಅಪಾರ ಪ್ರಮಾಣದಲ್ಲಿ ಮೆಸೇಜ್ ಬರುತ್ತಿರುವುದರಿಂದ ಕಿರಿಕಿರಿ ಉಂಟಾಗಿ ಬ್ಲಾಕ್ ಮಾಡುತ್ತಿದ್ದಾರೆ ಎನ್ನಲಾಗಿದೆ.

Related Articles

Back to top button