Kannada NewsLatest

ಇಂದಿನದ್ದು ಸಭೆಯಲ್ಲ, ಊಟಕ್ಕೆ ಸೇರಿದ್ವಿ ಎಂದ ರಮೇಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ, ವರಿಷ್ಠರು ಬುದ್ಧಿವಂತರಿದ್ದಾರೆ. ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ, ಇಂದು ನಡೆದ ರಹಸ್ಯ ಸಭೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಇವತ್ತಿನದ್ದು ಸಭೆ ಅಲ್ಲ, ಊಟಕ್ಕೆ ಸೇರಿದ್ವಿ. ಆಗಾಗ ಊಟಕ್ಕೆ ಸೇರುತ್ತೇವೆ ಎಂದು ಹೇಳಿದರು.

Home add -Advt

ಬೆಳಗಾವಿಯಲ್ಲಿ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ನಡೆದ ಗೌಪ್ಯ ಸಭೆ ವಿಚಾರವಾಗಿ ಆ ಸಭೆ ಬಗ್ಗೆ ಏನೂ ಹೇಳಲ್ಲ, ಒಂದು ವೇಳೆ ಅವರು ಒಳ್ಳೆ ಉದ್ದೇಶಕ್ಕೆ, ಪಕ್ಷ ಸಂಘಟನೆ ನಿಟ್ಟಿನಲ್ಲಿ ಸಭೆ ನಡೆಸಿದ್ದರೆ ನಾನು ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸುವುದು ತಪ್ಪಾಗುತ್ತದೆ ಎಂದರು.

ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಏನೂ ಹೇಳಲ್ಲ, ವರಿಷ್ಠರು ಏನು ನಿರ್ಧಾರ ಕೈಗೊಳ್ಳುತ್ತಾರೆ ಅದಕ್ಕೆ ನಾವು ಬದ್ಧರಿದ್ದೇವೆ ಎಂದರು. ನಮ್ಮ ವರಿಷ್ಠರು ಬಹಳ ಬುದ್ಧಿವಂತರಿದ್ದಾರೆ. ಯಾರು ಏನು ಮಾಡುತ್ತಾರೆ ಎಂಬುದನ್ನು ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂದು ಹೇಳಿದರು.

ರಮೇಶ್ ಜಾರಕಿಹೊಳಿಯಿಂದಲೂ ರಹಸ್ಯ ಸಭೆ

Related Articles

Back to top button