Karnataka News
*ಚಲಿಸುತ್ತಿದ್ದ ಬಸ್ ನಲ್ಲಿ ಟರ್ಬೋ ಗ್ಯಾಸ್ ಸೋರಿಕೆ: ಚಾಲಕನ ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರಾದ ಪ್ರಯಾಣಿಕರು*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಬಸ್ ನಲ್ಲಿ ಇದ್ದಕ್ಕಿದ್ದಂತೆ ಹೊಗೆ ಆವರಿಸಿಕೊಂಡು ಅವಘಡ ಸಂಭವಿಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿಯ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಮಾರನಹಳ್ಳಿ ಬಳಿ ಬಸ್ ನಲ್ಲಿ ಭಾರಿ ಹೊಗೆ ಕಂಡುಬಂದಿದೆ. ಬಸ್ ನ ಎಸಿ ಟರ್ಬೋ ಗ್ಯಾಸ್ ಸೋರಿಕೆಯಾಗಿ ಈ ಅವಘಡ ಸಂಭವಿಸಿದೆ.
ತಕ್ಷಣ ಬಸ್ ನಿಲ್ಲಿಸಿದ ಚಾಲಕ ಪ್ರಯಾಣಿಕರನ್ನು ಕೆಳಗಿಳಿಸಿ ಪ್ರಾಣ ರಕ್ಷಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.