Belagavi NewsBelgaum NewsKannada NewsKarnataka NewsLatestPolitics

*5 ಕೋಟಿ ವೆಚ್ಚದಲ್ಲಿ‌ ಇಟಗಿ- ಸಾಸಲವಾಡ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲಾಗುವುದು*

ಸಚಿವ ರಾಮಲಿಂಗಾ ರೆಡ್ಡಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇಟಗಿ- ಸಾಸಲವಾಡ ಏತ ನೀರಾವರಿ ಯೋಜನೆಯ ಬಾಕಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಸಚಿವ ರಾಮಲಿಂಗಾ ರೆಡ್ಡಿ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆ ಬಿಜೆಪಿಯ ಚಂದ್ರು ಲಮಾಣಿ ಅವರು, “ಇಟಗಿ- ಸಾಸಲವಾಡ ಏತ ನೀರಾವರಿ ಯೋಜನೆ‌ ಕಳೆದ 3 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿಲ್ಲ. ಕೆರೆಗಳಿಗೆ ನೀರು ತುಂಬುವ ಕೆಲಸ ಆಗುತ್ತಿಲ್ಲ, ಯಾವಾಗ ಪೂರೈಸುತ್ತೀರಿ ” ಎಂದು ಕೇಳಿದ ಪ್ರಶ್ನೆಗೆ ಜಲಸಂಪನ್ಮೂಲ ಸಚಿವರ ಪರವಾಗಿ ರಾಮಲಿಂಗಾರೆಡ್ಡಿ ಅವರು ಉತ್ತರಿಸಿದರು.

“ಶಿರಹಟ್ಟಿ, ಮುಂಡರಗಿ ಹಾಗೂ ಹಾವೇರಿ ತಾಲೂಕುಗಳ 1983 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸಲು 2011 ರಲ್ಲಿ ಇಟಗಿ ಸಾಸಲವಾಡ ನೀರಾವರಿ ಯೋಜನೆಯನ್ನು ಲೋಕಾರ್ಪಣೆ ಮಾಡಲಾಗಿದ್ದು, ಒಟ್ಟು 29.88 ಕೋಟಿ ರೂ. ವೆಚ್ಚ ಮಾಡಲಾಗಿದೆ.

2015 ರಲ್ಲಿ ಇದರ ಉಸ್ತುವಾರಿ ಮತ್ತು ನಿರ್ವಹಣೆಯನ್ನು ಮುನಿರಾಬಾದ್ ನೀರಾವರಿ ವಲಯಕ್ಕೆ ಹಸ್ತಾಂತರಿಸಲಾಗಿತ್ತು.

ನಿರ್ವಹಣೆ ಕಾರ್ಯ ಗುತ್ತಿಗೆ ಚಾಲ್ತಿಯಲ್ಲಿ ಇದ್ದ ಕಾರಣ ಹಸ್ತಾಂತರ ಪ್ರಕ್ರಿಯೆ ಸಂಪೂರ್ಣವಾಗಿಲ್ಲ.

ತುಂಗಾ ಮೇಲ್ದಂಡೆ ಯೋಜನೆಗೆ ಶಿವಮೊಗ್ಗ ವಲಯದ ರಾಣೆಬೆನ್ನೂರು ಭಾಗಕ್ಕೆ 2019-20 ರಲ್ಲಿ ನೀರು ಹರಿಸಲಾಗಿದೆ ಎಂದು ವಿವರಿಸಿದರು.

14.8.2023 ರಲ್ಲಿ ಮುನಿರಾಬಾದ್ ನೀರಾವರಿ ಕೇಂದ್ರಕ್ಕೆ ಮತ್ತೆ ಹಸ್ತಾಂತರಗೊಂಡಿದೆ. ಪ್ರಸ್ತುತ ಸ್ಥಳ ಮತ್ತು ಲಿಫ್ಟ್ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಪಂಪ್ ದುರಸ್ತಿ, ವಿದ್ಯುತ್ ಸಂಪರ್ಕ, ಹೂಳು ತುಂಬಿರುವ, ಕಾಲುವೆ ಜಂಗಲ್ ಮುಂತಾದ ನ್ಯೂನ್ಯತೆ‌ಗಳು ಕಂಡಿಬಂದಿದೆ. ಇದರ ಪುನಶ್ಚೇತನಕ್ಕೆ 5 ಕೋಟಿ ವೆಚ್ಚವಾಗಲಿದೆ. ಇದಕ್ಕೆ ಅನೂಮೋದನೆ ಪಡೆದು ಶೀಘ್ರವೇ ಯೋಜನೆ ಪೂರ್ಣಗೊಳಿಸಲಾಗುವುದು” ಎಂದು ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button