Latest

‘ನಾ ನಿನ್ನ ಬಿಡಲಾರೆ…’ ಖ್ಯಾತಿಯ ಹಿರಿಯ ನಿರ್ಮಾಪಕ ಸಿ.ಜಯರಾಮ್ ನಿಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಸಿ.ಜಯರಾಮ್ ವಿಧಿವಶರಾಗಿದ್ದಾರೆ.

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿಯೇ ಹಿರಿಯ ನಿರ್ಮಾಪಕರನ್ನು ಕಳೆದುಕೊಂಡಿದ್ದು, ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ಕನ್ನಡದ ಹಲವು ಸ್ಟಾರ್ ನಟರ ಚಿತ್ರಗಳಿಗೆ ಜಯರಾಮ್ ಬಂಡವಾಳ ಹೂಡಿದ್ದರು.

ಶಂಕರ್ ನಾಗ್ ಅಭಿನಯದ ಆಟೋ ರಾಜ, ಅನಂತ್ ನಾಗ್ ಅಭಿನಯದ ‘ನಾ ನಿನ್ನ ಬಿಡಲಾರೆ’, ವಿಷ್ಣುವರ್ಧನ್ ಹಾಗೂ ರಜನಿಕಾಂತ್ ಅಭಿನಯದ ‘ಗಲಾಟೆ ಸಂಸಾರ’, ಶ್ರೀನಾಥ್-ಆರತಿ ಅಭಿನಯದ ‘ಪಾವನ ಗಂಗಾ’ ಮುಂತಾದ ಜನಪ್ರಿಯ ಚಿತ್ರಗಳನ್ನು ಜಯರಾಮ್ ನಿರ್ಮಿಸಿದ್ದರು. ಸಿ.ಜಯರಾಮ್ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಸುಮ್ಮನಹಳ್ಳಿ ರುದ್ರಭೂಮಿಯಲ್ಲಿ ನಡೆಯಲಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ

Home add -Advt

Related Articles

Back to top button