Latest

*ಕೇಸರಿ ಮನೆಯಿಂದ ಹೊರ ನಡೆದ ಮಾಜಿ ಸಿಎಂ; ಬಿಜೆಪಿಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ;ಶಿರಸಿ: ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ ಜಗದೀಶ್ ಶೆಟ್ಟರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು.

ರಾಜೀನಾಮೆ ಬಳಿಕ ಹುಬ್ಬಳ್ಳಿಗೆ ತೆರಳಲಿರುವ ಜಗದೀಶ್ ಶೆಟ್ಟರ್ ಬೆಂಬಲಿಗರ ಅಭಿಪ್ರಾಯ ಪಡೆದು ಕಾಂಗ್ರೆಸ್ ಸೇರ್ಪಡೆಯಾಗುವ ನಿಟ್ಟಿನಲ್ಲಿ ಚರ್ಚಿಸಲಿದ್ದಾರೆ. ಒಟ್ಟಾರೆ ಶೆಟ್ಟರ್ ಮುಂದಿನ ನಡೆ ಕುತೂಹಲ ಮೂಡಿಸಿದೆ.

Home add -Advt

https://pragati.taskdun.com/jagadish-shettarresgncm-basavaraj-bommai/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button