Kannada NewsLatestNational

*ವ್ಯಾಯಾಮ ಮಾಡುತ್ತಿದ್ದಾಗಲೇ ದುರಂತ; ಹೃದಯಾಘಾತದಿಂದ ಜೈಲಾಧಿಕಾರಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಪಾಣಿಪತ್: ಜೈಲು ಅಧಿಕಾರಿಯೊಬ್ಬರು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹರ್ಯಾಣದ ಪಾಣಿಪತ್ ನಲ್ಲಿ ನಡೆದಿದೆ.

ಹರ್ಯಾಣ ಜೈಲು ಉಪ ಅಧೀಕ್ಷಕರಾದ ಜೋಗಿಂದರ್ ದೇಸ್ವಾಲ್ ಮೃತರು. 52 ವರ್ಷದ ಜೋಗಿಂದರ್ ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ತಕ್ಷಣ ಜಿಮ್ ಸಿಬ್ಬಂದಿಗಳು ಅವರನ್ನು ಕರ್ನಾಲ್ ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಪ್ರಯೋಜನವಾಗಿಲ್ಲ. ಜೋಗಿಂದರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button