Latest

ಗುರಿ ತಪ್ಪಿ ಕಾಲಿಗೆ ಬಿದ್ದ ಗುಂಡೇಟು; ವ್ಯಕ್ತಿ ಸಾವು

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮೊಲ ಬೇಟೆಗೆ ಹಾರಿಸಿದ ಗುಂಡು ತಗುಲಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಸಂಭವಿಸಿದೆ.

ಇಲ್ಲಿನ ಕಾರ್ಯ ಎಂಬ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪ್ರಸನ್ನ ಎಂಬುವವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಕಾಡುಮೊಲ ಬೇಟೆಯಾಡಲೆಂದು ನಿಶಾಸ್ ಎಂಬಾತ ಬಂದೂಕಿನಿಂದ ಗುಂಡು ಹಾರಿಸಿದ್ದ. ಗುರಿ ತಪ್ಪಿದ ಪರಿಣಾಮ ಪ್ರಸನ್ನ ಎಂಬುವವರ ಕಾಲಿಗೆ ತಗುಲಿದೆ.

ಗಂಭೀರವಾಗಿ ಗಾಯಗೊಂಡಿದ್ದ ಪ್ರಸನ್ನರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರಸನ್ನ ಕೊನೆಯುಸಿರೆಳೆದಿದ್ದಾರೆ. ಹಲ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿಯ 418 ಗ್ರಾಮಗಳು ಕೋವಿಡ್ ಮುಕ್ತ ; ಪಂಚಾಯಿತಿಗೊಂದು ಕೆರೆ ಅಭಿವೃದ್ಧಿ

Home add -Advt

Related Articles

Back to top button