Belagavi NewsBelgaum NewsKannada NewsKarnataka NewsLatest

*ಜೈನಮುನಿ ಹತ್ಯೆ ಕೇಸ್; ನಂದಿಪರ್ವತ ಆಶ್ರಮಕ್ಕೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ*

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನಾ ಟೀಂ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಹಿರೇಕೋಡಿಯಲ್ಲಿರುವ ನಂದಿಪರ್ವತ ಆಶ್ರಮಕ್ಕೆ ಭೇಟಿ ನೀಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನಾ ತಂಡ, ನಂದಿಪರ್ವತ ಆಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ ಮುನಿಗಳ ಹತ್ಯೆಯಿಂದ ಆಘಾತಕ್ಕೊಳಗಾಗಿರುವ ಆಶ್ರಮದ ಸಿಬ್ಬಂದಿಗಳು ಕಣ್ಣೀರಿಟ್ಟಿದ್ದಾರೆ.

Home add -Advt

ಈ ವೇಳೆ ಜೈನಮುನಿಯ ಪೂರ್ವಾಶ್ರಮದವನ್ನು ನಳೀನ್ ಕುಮಾರ್ ಕಟೀಲ್ ಭೇಟಿಯಾಗಿ ಚರ್ಚ ನಡೆಸಿದ್ದಾರೆ. ಬಳಿಕ ಬಿಜೆಪಿ ನಾಯಕರು ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.


Related Articles

Back to top button