Belagavi NewsBelgaum NewsKannada NewsKarnataka NewsNational
*ಮೊಸಳೆ ದಾಳಿಗೆ ವ್ಯಕ್ತಿ ಬಲಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ದೂಧಗಂಗಾ ನದಿಯ ಜಾಕ್ವೆಲ್ ಬಳಿಯ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ದತ್ತವಾಡ ಗ್ರಾಮದ ನಿವಾಸಿ ಲಕ್ಷ್ಮಣ ಕಲ್ಲಪ್ಪ ಕಾಳಗಿ (60) ಮೃತ ವ್ಯಕ್ತಿ ಕೆಡಿಸಿಸಿ ಬ್ಯಾಂಕಿನ ನಿವೃತ್ತ ನೌಕರನಾಗಿದ್ದರು. ಈ ಕುರಿತು ಕುರಂದವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




