Kannada NewsKarnataka NewsLatest

*ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಆರೋಗ್ಯ ಇಲಾಖೆ ನೌಕರ*

ಪ್ರಗತಿವಾಹಿನಿ ಸುದ್ದಿ: ಮಲಗಿದ್ದಲ್ಲಿಯೇ ಆರೋಗ್ಯ ಇಲಾಖೆ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಗವೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 42 ವರ್ಷದ ದೇವಾನಂದ್ ಮೃತ ದುರ್ದೈವಿ. 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು.

Home add -Advt

ದೇವಾನಂದ್ ಅವರಿಗೆ ಇಂದು ಬೆಳಗಿನ ಜಾವ ಮಲಗಿದ್ದಲಿಯೇ ಹೃದಯಾಘಾತವಾಗಿದೆ. ತಕ್ಷಣ ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Related Articles

Back to top button