
ಪ್ರಗತಿವಾಹಿನಿ ಸುದ್ದಿ: ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳು ನಡೆಸಿದ ಆಪರೇಷನ್ ಮಹದೇವ್ ಕಾರ್ಯಾಚರಣೆಯಲ್ಲಿ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿದಂತೆ ಮೂವರು ಉಗ್ರರನ್ನು ಸದೆಬಡಿಯಲಾಗಿದೆ.
ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭದ್ರತಾಪಡೆಗಳು, ಪೊಲೀಸರು, ಸಿಆರ್ ಪಿಎಫ್ ಆಪರೇಷನ್ ಮಹಾದೇವ್ ಎಂಬ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಡ್ ಮೂಸಾ ಸೇರಿದಂತೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿದ್ದರು. ಈ ವೇಳೆ 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿದ್ದರು.