National

*ಕಾಶ್ಮೀರದಲ್ಲಿರುವ 178 ಕನ್ನಡಿಗರು ಇಂದು ತಾಯ್ನಾಡಿಗೆ*

ಸ್ವತಃ ಕರೆ ಮಾಡಿ ಮಾಹಿತಿ ಸಂಗ್ರಹಿಸಿದ ಲಾಡ್


ಪ್ರಗತಿವಾಹಿನಿ ಸುದ್ದಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ.

Home add -Advt

ಪಹಲ್ಗಾಮ್ ನಲ್ಲಿರುವ ಸಚಿವ ಸಂತೋಷ್ ಲಾಡ್ ಸಂತ್ರಸ್ತ ಕನ್ನಡಿಗರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಮೃತ ಕನ್ನಡಿಗರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ಒದಗಿಸಿದ್ದಾರೆ. ಕರ್ನಾಟಕಕ್ಕೆ ಮರಳುವ ಪ್ರವಾಸಿಗರಿಗೆ ವಿಶೇಷ ವಿಮಾನದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಪರ್ಕ ಸಂಖ್ಯೆ ಸಂಗ್ರಹಿಸಿ ಗುರುವಾರ ಹೊರಡಲಿರುವ ವಿಮಾನಕ್ಕೆ ಸಜ್ಜಾಗಿ ಎಂದು ಲಾಡ್ ಅವರೇ ತಿಳಿಸುತ್ತಿದ್ದಾರೆ. ಎಷ್ಟು ಪ್ರವಾಸಿಗರು ಇದ್ದೀರಿ? ಎಲ್ಲಿಯವರು ಎಂಬೆಲ್ಲ ವಿವರಗಳನ್ನು ಸಚಿವರು ಕಲೆ ಹಾಕಿ ರಾಜ್ಯಕ್ಕೆ ಮರಳಲು ಸಹಾಯ ಮಾಡಿದ್ದಾರೆ.

ಕಾಶ್ಮೀರ ಪ್ರವಾಸದಲ್ಲಿರುವ 178 ಕನ್ನಡಿಗರು ಇಂದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಮರಳಲಿದ್ದಾರೆ. ಸಚಿವ ಸಂತೋಷ್ ಲಾಡ್ ಅವರೇ ವಿಶೇಷ ವಿಮಾನದಲ್ಲಿ ಕನ್ನಡಿಗ ಪ್ರವಾಸಿಗರನ್ನು ವಾಪಸ್ ಕರೆತರಲಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button