Latest

ಪಾಕ್ ಸೇನೆಯ 8 ಯೋಧರನ್ನು ಹೊಡೆದುರುಳಿಸಿದ ಭಾರತ

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಸೇನೆ ಕದನವಿರಾಮ ಉಲ್ಲಂಘನೆ ಮಾಡಿ ಅಪ್ರಚೋದಿನ ಗುಂಡಿನ ದಾಳಿ ನಡೆಸಿದ್ದು, ಪಾಕ್ ಗೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆ ಪಾಕ್ ನ 8 ಸಿಬ್ಬಂದಿಗಳನ್ನು ಹೊಡೆದುರುಳಿಸಿದೆ.

ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಸವ್ಜಿಯಾನ್ ಸೆಕ್ಟರ್, ನೀಲಂ, ಅತ್ ಮುಖಮ್, ತೆಹಜಿಯಾದ್, ಜುರಾ ಸೇರಿದಂತೆ ಎಲ್ ಒಸಿಯುದ್ದಕ್ಕೂ ಪಾಕ್ ಸೇನೆ ಶೆಲ್ ದಾಳಿ ನಡೆಸಿದೆ. ಪಾಕ್ ದಾಳಿಯಲ್ಲಿ ಭಾರತೀಯ ಸೇನೆಯ ಮೂವರು ಯೋಧರು, ಮೂವರು ನಾಗರಿಕರು ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ.

ಈ ವೇಳೆ ಪಾಕ್ ವಿರುದ್ಧ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದ್ದು, ಪಾಕ್ ನ 8ಕ್ಕೂ ಹೆಚ್ಚು ಯೋಧರನ್ನು ಹೊಡೆದುರುಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button