Latest

ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ; 12 ಭಕ್ತರು ಸಾವು

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು-ಕಾಶ್ಮೀರದ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ ಸಂಭವಿಸಿ 12 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ದೆಹಲಿ, ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ ಸೇರಿದಂತೆ ವಿವಿಧ ರಾಜ್ಯಗಳ ಭಕ್ತರು ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ವೈಷ್ಣೋದೇವಿ ಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ಜಮ್ಮು-ಕಾಶ್ಮೀರ ಸರ್ಕಾರ ಉನ್ನತ ತನಿಖೆಗೆ ಆದೇಶಿಸಿದೆ. ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಾಳುಗಳಿಗೆ 50 ಸಾವಿರ ರೂಪಾಯಿ ಘೋಷಿಸಿದೆ.

Home add -Advt

ದುರಂತದ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮಾತಾ ವೈಷ್ಣೋದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಭಕ್ತರು ಮೃತಪಟ್ಟಿರುವುದು ಅತೀವ ದು:ಖ ತಂದಿದೆ. ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
9 ತಿಂಗಳ ಬಳಿಕ ಮತ್ತೆ ದಿಢೀರ್ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; ವ್ಯಾಪಕವಾಗಿ ಹರಡುತ್ತಿದೆ ರೂಪಾಂತರಿ ವೈರಸ್

Related Articles

Back to top button