Karnataka NewsLatestPolitics

*ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿರುವ ಬೆನ್ನಲ್ಲೇ ಮತ್ತೊಂದು ಬಿಗ್ ರಿಲೀಫ್ ಸಿಕ್ಕಿದೆ.

ಜನಾರ್ಧನ ರೆಡ್ದಿ ಅವರ ಶಾಸಕತ್ವ ಅಮಾನತು ಆದೇಶವನ್ನು ಕರ್ನಾಟಕ ವಿಧಾನಸಭೆ ಹಿಂಪಡೆದಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.

Home add -Advt

ತೆಲಂಗಾಣ ಹೈಕೋರ್ಟ್ ಜನಾರ್ಧನ ರೆಡ್ಡಿ ವಿರುದ್ಧದ ಶಿಕ್ಷೆಗೆ ತಡೆ ನೀಡಿರುವ ಬೆನ್ನಲ್ಲೇ ವಿಧಾನಸಭೆ ಜನಾರ್ಧನ ರೆಡ್ದಿ ಅವರ ಶಾಸಕತ್ವ ಅಮಾನತು ಆದೇಶ ವಾಪಸ್ ಪಡೆದಿದೆ. ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅವರಿಗೆ ಶಿಕ್ಷೆ ಪ್ರಕಟಗೊಂಡ ಹಿನ್ನೆಲೆಯಲ್ಲಿ ಅವರ ಶಾಸಕತ್ವ ಅಮಾನತುಗೊಳಿಸಲಾಗಿತ್ತು. ಶಿಕ್ಷೆಗೆ ತಡೆ ನೀಡಿದರೆ ಅಥವಾ ಶಿಕ್ಷೆ ರದ್ದಾದರೆ ಅಮಾನತು ಆದೇಶ ಹಿಂಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.


Related Articles

Back to top button