Belagavi NewsBelgaum News

*ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಭಕ್ತರು ಅಸ್ವಸ್ಥ*

ಐವರ ಸ್ಥಿತಿ ಗಂಭೀರ


ಪ್ರಗತಿವಾಹಿನಿ ಸುದ್ದಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಭಕ್ತರು ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟೆ ಗ್ರಾಮದಲ್ಲಿ ನಡೆದಿದೆ.

ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ, ಮನೆಯಲ್ಲಿ ಮಾವಿನ ಹಣ್ಣಿನ ಶೀಖರಣಿ ಸೇವಿಸಿದ್ದ 46 ಜನ ತೀವ್ರ ಅಸ್ವಸ್ಥಗೊಂಡಿದ್ದು, ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥರನ್ನು ಸವದತ್ತಿ ಸಾರ್ವಜನಿಕ ಆಸ್ಪತ್ರೆಗೆ ಹಾಗೂ ಕೆಲವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಐವರ ಸ್ಥಿತಿ ಗಂಭೀರವಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ವೈದ್ಯರು ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button