Karnataka News

*ರೈಲ್ವೆ ಇಲಾಖೆ ಪರೀಕ್ಷೆಯಲ್ಲಿ ಮಂಗಳಸೂತ್ರ ಸೇರಿದಂತೆ ಧಾರ್ಮಕ ಸಂಕೇತ ತೆಗೆದು ಹಾಜರಾಗುಂತೆ ಸೂಚನೆ: ಹೊಸ ವಿವಾದಕ್ಕೆ ಕಾರಣವಾದ ಆದೇಶ*

ಪ್ರಗತಿವಾಹಿನಿ ಸುದ್ದಿ: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಇದೀಗ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ. ಇದರ ಬೆನ್ನಲ್ಲೇ ರೈಲ್ವೆ ಇಲಾಖೆ ಪರೀಕ್ಷೆಯಲ್ಲಿ ಮಂಗಳಸೂತ್ರ ತೆಗೆದು ಪರೀಕ್ಷೆಗೆ ಹಾಜರಾಗುವಂತೆ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, ಹೊಸ ವಿವಾದ ಸೃಷ್ಟಿಸಿದೆ.

ರೈಲ್ವೆ ಇಲಾಖೆಗೆ ಸಂಬಂಧಿಸಿದ ಪರೀಕ್ಷೆಯೊಂದಕ್ಕೆ ಹಾಜರಾಅಗುಅವ್ವರು ಮಂಗಳಸೂತ್ರ, ಧರಮಿಕ ಸಂಕೇತಗಳನ್ನು ತೆಗೆದು ಪರೀಕ್ಷೆಗೆ ಹಾಜರಾಗಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ರೈಲ್ವೆ ನೇಮಕಾತಿ ಮಂಡಳಿಯ ಈ ಕ್ರಮಕ್ಕೆ ಹಿಂದೂಪರ ಸಂಘಟನೆಗಳು ಆಕ್ಷೇಪ ವ್ಯಜ್ತಪಡಿಸಿವೆ.

Home add -Advt

Related Articles

Back to top button