Kannada NewsKarnataka NewsLatest
*BREAKING: ಶಾಸಕಿ ಕರೆಮ್ಮ ನಾಯಕ್ ಕಾರು ಭೀಕರ ಅಪಘಾತ*

ಪ್ರಗತಿವಾಹಿನಿ ಸುದ್ದಿ: ದೇವದುರ್ಗದ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರಿನ ಲಿಂಗಸಗೂರು ತಾಲೂಕಿನ ಗೋಲಿಪಲ್ಲಿ ಗ್ರಾಮದಲ್ಲಿ ಶಾಸಕಿ ಕರೆಮ್ಮ ನಾಯಕ್ ಕಾರು ಮುಂದೆ ಹೋಗುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕರೆಮ್ಮ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.




