Uncategorized
*JDS ಭದ್ರಕೋಟೆಯಲ್ಲೇ ದಳಪತಿಗಳಿಗೆ ಬಿಗ್ ಶಾಕ್; 200ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಜೆಡಿಎಸ್ ಭದ್ರಕೋಟೆ ಎಂದೆ ಕರೆಯಲಾಗುತ್ತಿರುವ ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಭೇಟಿ ನೀಡಿದ ಬೆನ್ನಲ್ಲೇ ದಳಪತಿಗಳಿಗೆ ಕಾರ್ಯಕರ್ತರು ಬಿಗ್ ಶಾಕ್ ನೀಡಿದ್ದಾರೆ.
ಮಂಡ್ಯ ಹಾಗೂ ಶ್ರೀರಂಗಪಟ್ಟಣ ಭಾಗದ 200ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿಗಳಿಗೆ ಮತ್ತೊಂದು ಆಘಾತ ನೀಡಿದ್ದಾರೆ.
ಶ್ರೀರಂಗಪಟ್ಟಣದ ಖಾಸಗಿ ಸಭಾಭವನದಲ್ಲಿ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ನೇತೃತ್ವದಲ್ಲಿ 200ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ