
ಪ್ರಗತಿವಾಹಿನಿ ಸುದ್ದಿ, ಮುನವಳ್ಳಿ: ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಖ್ಯಾತ ಛಾಯಾಗ್ರಾಹಕರು ಹಾಗೂ ಪತ್ರಕರ್ತರೂ ಆಗಿದ್ದ ಬಸವರಾಜ ಚನ್ನಬಸಪ್ಪ ತುಳಜಣ್ಣವರ (51) ನಿಧನರಾಗಿದ್ದಾರೆ.
ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ನಿಧನರಾದರು. ಮೃತರಿಗೆ ಪತ್ನಿ,ಮೂವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ.
ಅವರ ಅಂತ್ಯಕ್ರಿಯೆ ಭಾನುವಾರ ಮುಂಜಾನೆ 9 ಗಂಟೆಗೆ ಮುನವಳ್ಳಿ ಪಟ್ಟಣದ ರುದ್ರ ಭೂಮಿಯಲ್ಲಿ ನಡೆಯಲಿದೆ.