*ಹಿರಿಯ ಪತ್ರಕರ್ತ ರಾಮ ಮನಗೂಳಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಪತ್ರಿಕಾ ರಂಗಕ್ಕೆ ಮತ್ತೊಂದು ಆಘಾತ. ಹಿರಿಯ ಪತ್ರಕರ್ತ ರಾಮ ಮನಗೂಳಿ (62) ಅನಾರೋಗ್ಯದಿಂದ ನಿಧನರಾಗಿದ್ದಾರೆ.Home add -Advt ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆಯ ರಾಮ ಮನಗೂಳಿ ಅನಾರೋಗ್ಯದಿಂದ ಕೆರೊಡಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ರಾಮ ಮನಗೂಳಿ ಅವರು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರು, ನಾಡನುಡಿ ದಿನ ಪತ್ರಿಕೆಯ ಸಂಪಾದಕರಾಗಿದ್ದರು. ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. … Continue reading *ಹಿರಿಯ ಪತ್ರಕರ್ತ ರಾಮ ಮನಗೂಳಿ ಇನ್ನಿಲ್ಲ*