Kannada NewsKarnataka NewsLatestNational

*ಪತ್ರಕರ್ತನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಪತ್ರಕರ್ತನೋರ್ವನನ್ನು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

ವಿಮಲ್ ಕುಮಾರ್ ಯಾದವ್ ಮೃತ ಪತ್ರಕರ್ತ. ದೈನಿಕ್ ಜಾಗರಣ್ ಎಂಬ ಹಿಂದಿ ಸುದ್ದಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ರಾಣಿಗಂಜ್ ನಿವಾಸಿಯಾಗಿದ್ದ ವಿಮಲ್ ಕುಮಾರ್, ಅರಾರಿಯಾದಲ್ಲಿ ವಾಸವಾಗಿದ್ದರು.

Related Articles
Home add -Advt

ವಿಮಲ್ ಕುಮಾರ್ ಮನೆಗೆ ಮುಂಜಾನೆ 5 ಗಂಟೆ ವೇಳೆಗೆ ನುಗ್ಗಿದ ದುಷ್ಕರ್ಮಿಗಳು, ಅವರನ್ನು ಗುಂಡಿಟ್ಟು ಹತ್ಯೆಗೈದು ಪರಾರಿಯಾಗಿದ್ದಾರೆ. ವಿಮಲ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ವಿಮಲ್ ಕುಮಾರ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇನ್ನು 2019ರಲ್ಲಿ ವಿಮಲ್ ಕುಮಾರ್ ಅವರ ಸಹೋದರನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಘಟನೆಗೆ ವಿಮಲ್ ಕುಮಾರ್ ಒಬ್ಬರೇ ಸಾಕ್ಷಿಯಾಗಿದ್ದರು ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.


Related Articles

Back to top button